ಕಣಿವೆಯಿಂದ ನೀರು ಮುತ್ತುಗಳಂತೆ ಬಂಡೆಗಳ ಮೇಲೆ ಬಿದ್ದು ಸಂಗೀತದಂತೆ ಪ್ರತಿಧ್ವನಿಸುವ ಕಲ್ಪನೆಯೇ ಅದ್ಭುತವಾಗಿದೆ. ಈ ಕಲ್ಪನೆಗೆ ಜೀವಂತಿಕೆ ನೀಡಲು ಹಾಗೂ ಈ ಸುಂದರವಾದ ಅನುಭವವನ್ನು ಪಡೆಯಲು ಬೆಂಗಳೂರಿನಿಂದ 40 ಕಿ.ಮೀ ದೂರದಲ್ಲಿ ಆನೇಕಲ್ ಬಳಿ ಇರುವ ಮುತ್ಯಾಲಮಡುವು ಸ್ಥಳಕ್ಕೆ ಆಗಮಿಸಿ.
ಹೋಟೆಲ್ ಮಯೂರ ನಿಸರ್ಗ ಪರ್ಲ್ ವ್ಯಾಲಿ ಘಟಕವು ಮುತ್ಯಾಲಮಡುವಿಗೆ ಅತೀ ಸಮೀಪದಲ್ಲಿದ್ದು, ಆನೇಕಲ್ ನಿಂದ 5 ಕಿ.ಮೀ ದೂರದಲ್ಲಿದೆ. ಸದರಿ ಹೋಟೆಲ್ ಘಟಕವು 05 ಬೆಡ್ರೂಮ್ ಗಳನ್ನು ಮತ್ತು ರೆಸ್ಟೋರೆಂಟ್ನ್ನು ಹೊಂದಿದ್ದು, ಇಲ್ಲಿಗೆ ಆಗಮಿಸುವ ಅತಿಥಿಗಳಿಗೆ ಮನೆಯಲ್ಲಿ ಇರುವಂತೆ ಬಾಸವಾಗುತ್ತದೆ.
ಸೂಚನೆ:
ಹೋಟೆಲ್ ಬುಕ್ಕಿಂಗ್ನಲ್ಲಿ ಅನ್ವಯಿಸತಕ್ಕ ಷರತ್ತು ಮತ್ತು ನಿಬಂಧನೆಗಳು:
ದಯವಿಟ್ಟು ಗಮನಿಸಿ: ಬುಕ್ಕಿಂಗ್ನಲ್ಲಿ ಒಮ್ಮೆ ತಿದ್ದುಪಡಿ ಮಾಡಿದ ನಂತರ ಮೊತ್ತೊಮ್ಮೆ ತಿದ್ದಪಡಿ ಮಾಡಲು ಅಥವಾ ರದ್ದುಗೊಳಿಸಲು ಸಾಧ್ಯವಿರುವುದಿಲ್ಲ. ಅಲ್ಲದೇ, ತಿದ್ದುಪಡಿಯು ದಿನಾಂಕ ಮತ್ತು ಕೊಠಡಿಯನ್ನು ಮಾತ್ರ ಒಳಗೊಂಡಿರುವುದಲ್ಲದೇ, ಕೆ.ಎಸ್.ಟಿ.ಡಿ.ಸಿ ಯ ಮಯೂರ ಹೋಟೆಲ್ಗಳಲ್ಲಿ ಬದಲಾವಣೆಯನ್ನು ಮಾಡುವ ಅವಕಾಶವನ್ನು ಹೊಂದಿರುತ್ತದೆ.
ಹೋಟೆಲ್ ಬುಕ್ಕಿಂಗ್ ರದ್ದುಪಡಿಸಲು ಇರುವ ನಿಯಮಗಳು
ಕಾಲೋಚಿತವಲ್ಲದ ಸಂದರ್ಭ ಅಂದರೆ, ಜನವರಿ, ಫೆಬ್ರವರಿ, ಮಾರ್ಚ್, ಜುಲೈ ಹಾಗೂ ಆಗಸ್ಟ್ ಮಾಹೆಗಳಲ್ಲಿ ಬುಕ್ಕಿಂಗ್ ರದ್ದುಪಡಿಸಲು ನಿಯಮಗಳು ಈ ಕೆಳಕಂಡಂತಿರುತ್ತವೆ.