ಭಾಗಮಂಡಲವು ಕೇವಲ ಗಿರಿದಾಮವಲ್ಲದೇ, ಸ್ವರ್ಗದಂತಿರುವ ತಾಣವಾಗಿದ್ದು, ಭಕ್ತಿ ಮತ್ತು ಶಾಂತಿಯ ಹುಡುಕಾಟದಲ್ಲಿರುವ ಜನರಿಗೆ ಇದು ಸೂಕ್ತವಾದ ಸ್ಥಳವಾಗಿದೆ. ಈ ಪ್ರದೇಶದಲ್ಲಿ ಎರಡು ನದಿಗಳ ಸಂಗಮವಾಗಲಿದ್ದು, ಮೂರನೇಯ ಜಲಾಂತರ್ಗಾಮಿ ಕೂಡಾ ಸೇರಿಕೊಳ್ಳುತ್ತದೆ. ನದಿಯ ದಂಡೆಯಲ್ಲಿ ಹಿಂದೂ ಧರ್ಮದ ತ್ರಿಮೂರ್ತಿಗಳಿಗೆ ಮೀಸಲಾಗಿರುವ ದೇವಾಲಯಗಳಿದ್ದು, ಶಿವನನ್ನು ಭಗಂಡೇಶ್ವರ, ಬ್ರಹ್ಮ ಮತ್ತು ಮಾಹಾವಿಷ್ಟು ಎಂದು ಪೂಜಿಸಲಾಗುತ್ತದೆ. ಕಾವೇರಿ ನದಿಯ ಮೂಲವಾದ ತಲಕಾವೇರಿ 7 ಕಿ.ಮೀ ದೂರದಲ್ಲಿದೆ.
ಹೋಟೆಲ್ ಮಯೂರ ತಲಕಾವೇರಿ ಘಟಕವು ಬೆಟ್ಟದ ಇಳಿಜಾರಿನಲ್ಲಿದೆ ಮತ್ತು ಮೋಡಿ ಮಾಡುವ ಕೂರ್ಗ್ ಭೂದೃಶ್ಯದ ಪಕ್ಷಿಗಳ ನೋಟವನ್ನು ನೀಡುತ್ತದೆ. ಸದರಿ ಹೋಟೆಲ್ ಘಟಕವು 18 ಡಬಲ್ ರೂಮ್ಗಳು ಮತ್ತು ಸಸ್ಯಾಹಾರಿ ರೆಸ್ಟೋರೆಂಟ್ ಹೊಂದಿರುವ ಆಕರ್ಷಕ ಕೇಂದ್ರವಾಗಿದೆ.
ಸೂಚನೆ:
ಹೋಟೆಲ್ ಬುಕ್ಕಿಂಗ್ನಲ್ಲಿ ಅನ್ವಯಿಸತಕ್ಕ ಷರತ್ತು ಮತ್ತು ನಿಬಂಧನೆಗಳು:
ದಯವಿಟ್ಟು ಗಮನಿಸಿ: ಬುಕ್ಕಿಂಗ್ನಲ್ಲಿ ಒಮ್ಮೆ ತಿದ್ದುಪಡಿ ಮಾಡಿದ ನಂತರ ಮೊತ್ತೊಮ್ಮೆ ತಿದ್ದಪಡಿ ಮಾಡಲು ಅಥವಾ ರದ್ದುಗೊಳಿಸಲು ಸಾಧ್ಯವಿರುವುದಿಲ್ಲ. ಅಲ್ಲದೇ, ತಿದ್ದುಪಡಿಯು ದಿನಾಂಕ ಮತ್ತು ಕೊಠಡಿಯನ್ನು ಮಾತ್ರ ಒಳಗೊಂಡಿರುವುದಲ್ಲದೇ, ಕೆ.ಎಸ್.ಟಿ.ಡಿ.ಸಿ ಯ ಮಯೂರ ಹೋಟೆಲ್ಗಳಲ್ಲಿ ಬದಲಾವಣೆಯನ್ನು ಮಾಡುವ ಅವಕಾಶವನ್ನು ಹೊಂದಿರುತ್ತದೆ.
ಹೋಟೆಲ್ ಬುಕ್ಕಿಂಗ್ ರದ್ದುಪಡಿಸಲು ಇರುವ ನಿಯಮಗಳು
ಕಾಲೋಚಿತವಲ್ಲದ ಸಂದರ್ಭ ಅಂದರೆ, ಜನವರಿ, ಫೆಬ್ರವರಿ, ಮಾರ್ಚ್, ಜುಲೈ ಹಾಗೂ ಆಗಸ್ಟ್ ಮಾಹೆಗಳಲ್ಲಿ ಬುಕ್ಕಿಂಗ್ ರದ್ದುಪಡಿಸಲು ನಿಯಮಗಳು ಈ ಕೆಳಕಂಡಂತಿರುತ್ತವೆ.